Bhasaka
← Back to home

ನೀನಲ್ಲದಿನ್ನಾರು

Author: ಸ್ವಾಮಿ ತದ್ರೂಪಾನಂದCategory: ಶ್ರೀರಾಮಕೃಷ್ಣRaaga: ಸಾಹಾನಾTaala: ಝಪತಾಲ
ನೀನಲ್ಲದಿನ್ನಾರು ಚಿರಬಂಧು ಎನಗೆ ನಿನ್ನನ್ನೆ ಕರೆಯುತಿಹೆ ಹೃದಯದೇಗುಲಕೆ || ಕಾತರದ ಅಳಲಿನಲಿ ಪರಿಪೂತ ಹೃದಯವದು ಕ್ಷೇತ್ರವೆನೆ ಆಗಿಹುದು ದಕ್ಷಿಣೇಶ್ವರವು | ಜನ್ಮಜನ್ಮಾಂತರದ ಸಂಸ್ಕಾರತರುರಾಜಿ ಪಂಚವಟಿಯಂದದಲಿ ಮಿಗೆ ಒಪ್ಪುತಿಹುದು || ಹಗಲಿರುಳು ಎನ್ನೆದೆಯ ಹಂಬಲಿನ ಹೊನಲದುವೆ ಜಗವ ಪಾವನಗೈವ ಗಂಗೆಯಾಗಿಹುದು | ಜೀವಿಗಳ ಎದೆಯಲ್ಲಿ ಅನವರತ ನೆಲೆಸಿರುವ ದೇವತೆಯೆ ಇಲ್ಲೀಗ ಮಾತೆ ಭವತಾರಿಣೀ || ಹೇ ದಿವ್ಯ ಅರ್ಚಕನೆ ಪಂಚವಟಿಪ್ರಿಯನೆ ಭವತಾರಿಣೀತನಯ ಸುರನದಿಯ ಭಕ್ತ | ಬಂದಿಲ್ಲಿ ಎಚ್ಚರಿಸು ಪ್ರೇಮಮಯಿ ಜನನಿಯನು ಬಂಧನವು ಹರಿಯುವುದು ಮಾತೆಯೊಲುಮೆಯಲಿ ||

Thoughts & Reflections

0

No reflections shared yet. Be the first to share your thoughts!

Share your thought