Bhasaka
← Back to home

ಮಂದಮತಿ ನಾನಯ್ಯ ಮಂಗಳಾಂಗಾ

Author: ವಿಜಯದಾಸCategory: ಶ್ರೀಕೃಷ್ಣ
ಮಂದಮತಿ ನಾನಯ್ಯ ಮಂಗಳಾಂಗಾ ಒಂದಾದರೂ ಗತಿ ಧರ್ಮ ಚಿಂತಿಸಲಿಲ್ಲಾ ಜಪತಪಗಳರಿಯೆ ಉಪವಾಸಗಳರಿಯೆ ಕೃಪೆ ಮಾಡಲರಿಯೇ ಪರಿಜನಗಳಲ್ಲಿ ಕುಪಿತವನು ಬಿಡಲರಿಯೆ ಅಪರಿಮಿತವಾಗಿದ್ದ ಅಪರಾಧಗಳ ಮಾಡಿ ತಪಿಸುವೆನು ಭವದೊಳಗೆ ||1|| ಯಾತ್ರೆ ಮಾಡಲರಿಯೆ ತೀರ್ಥ ಮೀಯಲರಿಯೆ ಗಾತ್ರದಂಡಣಿಯ ಮಾಡಲರಿಯೆ ಸ್ತೋತ್ರ ಪಠಿಸಲರಿಯೆ ಗಾತ್ರ ಲಘು ನೋಡಿ ಸ ತ್ಪಾತ್ರರನು ಭಜಿಸದೆ ವ್ಯರ್ಥ ಕಾಲವ ಕಳೆವ||2|| ಅನ್ನದಾನವರಿಯೆ ಮನ್ನಣೆ ಮಾಡಲರಿಯೆ ಚನ್ನಾಗಿ ಬಂಧುಗಳು ಪೊರಿಯಲರಿಯೆ ಎನ್ನ ಮನದೊಡಿಯ ಶ್ರೀ ವಿಜಯವಿಠ್ಠಲರೇಯಾ ನಿನ್ನ ಭಕುತಿ ಒಮ್ಮೆ ಪಡಿಯಲರಿಯೆ ||3||

Thoughts & Reflections

0

No reflections shared yet. Be the first to share your thoughts!

Share your thought