ॐ
ಅಯ್ಯಾ, ಕತ್ತಲೆಯ ಕಳೆದುಳಿದ ಸತ್ಯಶರಣರ
ಪರಿಯನೇನೆಂಬೆನಯ್ಯಾ
ಘನವನೊಳಕೊಂಡ ಮನದ ಮಹಾನುಭಾವಿಗಳ
ಬಳಿವಿಡಿದು ಬದುಕುವೆನಯ್ಯಾ.
ಅಯ್ಯಾ, ನಿನ್ನಲ್ಲಿ ನಿಂದು ಬೇರೊಂದರಿಯದ
ಲಿಂಗಸುಖಿಗಳ ಸಂಗದಲ್ಲಿ ದಿನವ ಕಳೆಯಿಸಯ್ಯಾಚೆನ್ನಮಲ್ಲಿಕಾರ್ಜುನಾ.
Thoughts & Reflections
0No reflections shared yet. Be the first to share your thoughts!