Bhasaka
← Back to home

ಅರಲುಗೊಂಡ ಕೆರೆಗೆ ತೊರೆಬಂದು ಹಾಯ್ದಂತಾಯಿತ್ತು.

Author: ಅಕ್ಕಮಹಾದೇವಿCategory: ವಚನಗಳು
ಅರಲುಗೊಂಡ ಕೆರೆಗೆ ತೊರೆಬಂದು ಹಾಯ್ದಂತಾಯಿತ್ತು. ಬರಲುಗೊಂಡ ಸಸಿಗೆ ಮಳೆ ಸುರಿದಂತಾಯಿತ್ತು ನೋಡಾ ಇಂದೆನಗೆ. ಇಹದ ಸುಖ ಪರದ ಗತಿ ನಡೆದು ಬಂದಂತಾಯಿತ್ತು ನೋಡಾ ಎನಗೆ. ಚೆನ್ನಮಲ್ಲಿಕಾರ್ಜುನಯ್ಯಾ,ಗುರುಪಾದವ ಕಂಡು ಧನ್ಯಳಾದೆ ನೋಡಾ.

Thoughts & Reflections

0

No reflections shared yet. Be the first to share your thoughts!

Share your thought