ॐ
ಆತುರದ ಧ್ಯಾನದಿಂದ ಧಾವತಿಗೊಂಡೆ ;
ಜ್ಯೋತಿರ್ಲಿಂಗವ ಕಾಣಿಸಬಾರದು.
ಮಾತಿನ ಮಾಲೆಗೆ ಸಿಲುಕುವನಲ್ಲ ;
ಧಾತುಗೆಡಿಸಿ ಮನವ ನೋಡಿ ಕಾಡುವನು.
ಆತುಮನಂತರ ಪರವನರಿದಡೆ ಆತನೆ ಯೋಗಿ ;
ಆತನ ಪಾದಕ್ಕೆ ಶರಣೆಂಬೆನಯ್ಯಾಚೆನ್ನಮಲ್ಲಿಕಾರ್ಜುನಾ.
Thoughts & Reflections
0No reflections shared yet. Be the first to share your thoughts!