ॐ
ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ ಹಿಂಗಿ,
ಸಂಶಯ ಸಂಬಂಧ ವಿಸಂಬಂಧವಾಯಿತ್ತು ನೋಡಾ.
ಎನ್ನ ಮನದೊಳಗೆ ಘನಪರಿಣಾಮವ ಕಂಡು
ಮನ ಮಗ್ನವಾಯಿತ್ತಯ್ಯಾ.
ಚೆನ್ನಮಲ್ಲಿಕಾರ್ಜುನಾ, ನಿಮ್ಮ ಶರಣ ಪ್ರಭುದೇವರ
ಕರುಣದಿಂದ ಬದುಕಿದೆನಯ್ಯಾ.
Thoughts & Reflections
0No reflections shared yet. Be the first to share your thoughts!