ॐ
ಉರಿಯ ಫಣಿಯನುಟ್ಟು ಊರಿಂದ ಹೊರಗಿರಿಸಿ,
ಕರೆಯಲಟ್ಟಿದ ಸಖಿಯ ನೆರೆದ ನೋಡೆಲೆಗವ್ವಾ.
ತೂರ್ಯಾವಸ್ಥೆಯಲ್ಲಿ ತೂಗಿ ತೂಗಿ ನೋಡಿ
ಬೆರಗಾಗಿ ನಿಲಲಾರೆನವ್ವಾ.
ಆರವಸ್ಥೆ ಕರ ಹಿರಿದು ಎಲೆ ತಾಯೆ.
ಗಿರಿ ಬೆಂದು ತರುವುಳಿದು ಹೊನ್ನರಳೆಯ ಮರನುಲಿವಾಗ
ಹಿರಿಯತನಗೆಡಿಸಿ ನೆರೆವೆನು ಚೆನ್ನಮಲ್ಲಿಕಾರ್ಜುನನ.
Thoughts & Reflections
0No reflections shared yet. Be the first to share your thoughts!