Bhasaka
← Back to home

ಕಟ್ಟಿದ ಕೆರೆಗೆ ಕೋಡಿ ಮಾಣದು.

Author: ಅಕ್ಕಮಹಾದೇವಿCategory: ವಚನಗಳು
ಕಟ್ಟಿದ ಕೆರೆಗೆ ಕೋಡಿ ಮಾಣದು. ಹುಟ್ಟಿದ ಪ್ರಾಣಿಗೆ ಪ್ರಳಯ ತಪ್ಪದಿನ್ನೆಂತಯ್ಯಾ ? ಅರುಹಿರಿಯರೆಲ್ಲ ವೃಥಾ ಕೆಟ್ಟು ಹೋದರಿನ್ನೆಂತಯ್ಯಾ ? ಚೆನ್ನಮಲ್ಲಿಕಾರ್ಜುನದೇವರಿಗೋತು ಮುಟ್ಟಿದವರೆಲ್ಲಾ ನಿಶ್ಚಿಂತರಾದರು.

Thoughts & Reflections

0

No reflections shared yet. Be the first to share your thoughts!

Share your thought