Bhasaka
← Back to home

ಕಲ್ಯಾಣಕೈಲಾಸವೆಂಬ ನುಡಿ ಹಸನಾಯಿತ್ತು.

Author: ಅಕ್ಕಮಹಾದೇವಿCategory: ವಚನಗಳು
ಕಲ್ಯಾಣಕೈಲಾಸವೆಂಬ ನುಡಿ ಹಸನಾಯಿತ್ತು. ಒಳಗೂ ಕಲ್ಯಾಣ ಹೊರಗೂ ಕಲ್ಯಾಣ. ಇದರಂತುವನಾರು ಬಲ್ಲರಯ್ಯಾ ? ನಿಮ್ಮ ಸತ್ಯ ಶರಣರ ಸುಳುಹು ತೋರುತ್ತಿದೆಯಯ್ಯಾ. ನಿಮ್ಮ ಶರಣ ಬಸವಣ್ಣನ ಕಾಂಬೆನೆಂಬ ತವಕವೆನಗಾಯಿತ್ತು ಕೇಳಾ ಚೆನ್ನಮಲ್ಲಿಕಾರ್ಜುನಾ.

Thoughts & Reflections

0

No reflections shared yet. Be the first to share your thoughts!

Share your thought