Bhasaka
← Back to home

ಕಾಯದ ಕಾರ್ಪಣ್ಯವರತಿತ್ತು, ಕರಣಂಗಳ ಕಳವಳವಳಿದಿತ್ತು.

Author: ಅಕ್ಕಮಹಾದೇವಿCategory: ವಚನಗಳು
ಕಾಯದ ಕಾರ್ಪಣ್ಯವರತಿತ್ತು, ಕರಣಂಗಳ ಕಳವಳವಳಿದಿತ್ತು. ಮನ ತನ್ನ ತಾರ್ಕಣೆಯ ಕಂಡು ತಳವೆಳಗಾದುದು. ಇನ್ನೇವೆನಿನ್ನೇವೆನಯ್ಯಾ ? ನಿಮ್ಮ ಶರಣ ಬಸವಣ್ಣನ ಶ್ರೀಪಾದವ ಕಂಡಲ್ಲದೆ ಬಯಕೆ ಬಯಲಾಗದು. ಇನ್ನೇವೆನಿನ್ನೇವೆನಯ್ಯಾ ಚೆನ್ನಮಲ್ಲಿಕಾರ್ಜುನಾ ?

Thoughts & Reflections

0

No reflections shared yet. Be the first to share your thoughts!

Share your thought