ॐ
ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ.
ಕಾಲ ಬಲ್ಲಿದನೆಂದಡೆ ಕೆಡಹಿ ತುಳಿದ.
ಎಲೆ ಅವ್ವಾ, ನೀನು ಕೇಳಾ ತಾಯೆ.
ಬ್ರಹ್ಮ ಬಲ್ಲಿದನೆಂದಡೆ ಶಿರವ ಚಿವುಟಿಯಾಡಿದ.
ಎಲೆ ಅವ್ವಾ ನೀನು ಕೇಳಾ ತಾಯೆ.
ವಿಷ್ಣು ಬಲ್ಲಿದನೆಂದಡೆ ಆಕಳ ಕಾಯ್ದಿರಿಸಿದ.
ತ್ರಿಪುರದ ಕೋಟೆ ಬಲ್ಲಿತ್ತೆಂದಡೆ
ನೊಸಲಕಂಗಳಲುರುಹಿದನವ್ವಾ.
ಇದು ಕಾರಣ, ಚೆನ್ನಮಲ್ಲಿಕಾರ್ಜುನ ಗಂಡನೆನಗೆ,
ಜನನ ಮರಣಕ್ಕೊಳಗಾಗದ ಬಲುಹನೇನ ಬಣ್ಣಿಪೆನವ್ವಾ.
Thoughts & Reflections
0No reflections shared yet. Be the first to share your thoughts!