Bhasaka
← Back to home

ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು.

Author: ಅಕ್ಕಮಹಾದೇವಿCategory: ವಚನಗಳು
ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು. ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು. ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು. ಚೆನ್ನಮಲ್ಲಿಕಾರ್ಜುನಯ್ಯಾ, ಶಿರ ಹರಿದು ಬಿದ್ದಡೆ ಪ್ರಾಣ ನಿಮಗರ್ಪಿತವೆಂಬೆನು.

Thoughts & Reflections

0

No reflections shared yet. Be the first to share your thoughts!

Share your thought