ॐ
ಕೀಡಿ ತುಂಬಿಯ ಹಂಬಲದಿಂದ ತುಂಬಿಯಾಗಿ
ತನ್ನ ಬಿಡಲುಂಟೆ ಅಯ್ಯಾ ?
ಆನು ನಿಮ್ಮ ನೆನೆದು
ಎನ್ನ ಕರತುಂಬಿ, ಎನ್ನ ಮನತುಂಬಿ, ಎನ್ನ ಭಾವತುಂಬಿ,
ಮತ್ತಿಲ್ಲದೆ ನಿನ್ನ ಕೂಟದ ಸವಿಗಲೆಯನೆಂತು ಕಾಣುವೆನಯ್ಯಾ ಚೆನ್ನಮಲ್ಲಿಕಾರ್ಜುನಾ ?
Thoughts & Reflections
0No reflections shared yet. Be the first to share your thoughts!