ॐ
ಗುರುಪಾದತೀರ್ಥವೆ ಮಂಗಳ ಮಜ್ಜನವೆನಗೆ.
ವಿಭೂತಿಯೆ ಒಳಗುಂದದರಿಷಿಣವೆನಗೆ
ದಿಗಂಬರವೆ ದಿವ್ಯಾಂಬರವೆನಗೆ.
ಶಿವಭಕ್ತರ ಪಾದರೇಣುವೆ ಅನುಲೇಪನವೆನಗೆ.
ರುದ್ರಾಕ್ಷಿಯೆ ಮೈದೊಡಿಗೆಯೆನಗೆ.
ಶರಣರ ಪಾದರಕ್ಷೆಯೆ ಶಿರದಲ್ಲಿ ತೊಂಡಿಲುಬಾಸಿಗವೆನಗೆ.
ಚೆನ್ನಮಲ್ಲಿಕಾರ್ಜುನನ ಮದವಳಿಗೆಗೆ ಬೇರೆ ಶೃಂಗಾರವೇಕೆ ಹೇಳಿರೆ ಅವ್ವಗಳಿರಾ ?
Thoughts & Reflections
0No reflections shared yet. Be the first to share your thoughts!