Bhasaka
← Back to home

ಚಂದನವ ಕಡಿದು ಕೊರೆದು ತೇದಡೆ

Author: ಅಕ್ಕಮಹಾದೇವಿCategory: ವಚನಗಳು
ಚಂದನವ ಕಡಿದು ಕೊರೆದು ತೇದಡೆ ನೊಂದೆನೆಂದು ಕಂಪ ಬಿಟ್ಟಿತ್ತೆ ? ತಂದು ಸುವರ್ಣವ ಕಡಿದೊರೆದಡೆ ಬೆಂದು ಕಳಂಕ ಹಿಡಿಯಿತ್ತೆ ? ಸಂದುಸಂದು ಕಡಿದ ಕಬ್ಬನು ತಂದು ಗಾಣದಲ್ಲಿಕ್ಕಿ ಅರೆದಡೆ, ಬೆಂದು ಪಾಕಗುಡದೆ ಸಕ್ಕರೆಯಾಗಿ ನೊಂದೆನೆಂದು ಸಿಹಿಯ ಬಿಟ್ಟಿತ್ತೆ ? ನಾ ಹಿಂದೆ ಮಾಡಿದ ಹೀನಂಗಳೆಲ್ಲವ ತಂದು ಮುಂದಿಳುಹಲು ನಿಮಗೇ ಹಾನಿ. ಎನ್ನ ತಂದೆ ಚೆನ್ನಮಲ್ಲಿಕಾರ್ಜುನಯ್ಯಾ, ನೀ ಕೊಂದಡೆಯೂ ಶರಣೆಂಬುದ ಮಾಣೆ.

Thoughts & Reflections

0

No reflections shared yet. Be the first to share your thoughts!

Share your thought