Bhasaka
← Back to home

ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ

Author: ಅಕ್ಕಮಹಾದೇವಿCategory: ವಚನಗಳು
ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ ಷಟ್‍ಚಕ್ರಂಗಳಲ್ಲಿ ಹುಟ್ಟಿರ್ದ ಷಟ್ಕಮಲಂಗಳನು ಆಧಾರ ತೊಡಗಿ ಆe್ಞಚಕ್ರವೇ ಕಡೆಯಾಗುಳ್ಳ ಬ್ರಹ್ಮಾದಿಗಳ ಸ್ಥಾನಂಗಳ ಗುರೂಪದೇಶದಿಂದೆ ಭಾವಿಸುವುದು. ಆe್ಞಚಕ್ರದತ್ತಣಿಂದೆ ಊಧ್ರ್ವ ಭಾಗವಾದ ಬ್ರಹ್ಮರಂಧ್ರದಲ್ಲಿಯಾಯಿತ್ತಾದಡೆ ಸಹಸ್ರದಳ ಕಮಲವನು ಭಾವಿಸುವುದು. ಆ ಸಹಸ್ರದಳ ಕಮಲದಲ್ಲಿ ನಿರ್ಮಲವಾದ ಚಂದ್ರಮಂಡಲವನು ಧ್ಯಾನಿಸುವುದು. ಆ ಚಂದ್ರಮಂಡಲದ ಮಧ್ಯದಲ್ಲಿ ವಾಲಾಗ್ರ ಮಾತ್ರದೋಪಾದಿಯಲ್ಲಿ ಪರಮ ಸೂಕ್ಷ್ಮರಂಧ್ರವನು ಉಪದೇಶದಿಂದರಿವುದು. ಆ ಸೂಕ್ಷ್ಮರಂಧ್ರವನೆ ಕೈಲಾಸಸ್ಥಾನವಾಗಿ ಅರಿದು ಆ ಕೈಲಾಸದಲ್ಲಿ ಇರುತಿರ್ದ ಪರಮೇಶ್ವರನನು ಸಮಸ್ತ ಕಾರಣಂಗಳಿಗೆ ಕಾರಣವಾಗಿದ್ದಾತನಾಗಿ ಧ್ಯಾನಿಸುವುದಯ್ಯಾ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.

Thoughts & Reflections

0

No reflections shared yet. Be the first to share your thoughts!

Share your thought