Bhasaka
← Back to home

ತನುವೆಂಬ ಸಾಗರ ತುಂಬಲು,

Author: ಅಕ್ಕಮಹಾದೇವಿCategory: ವಚನಗಳು
ತನುವೆಂಬ ಸಾಗರ ತುಂಬಲು, ಮನವೆಂಬುದು ಹರುಗೋಲಾಯಿತ್ತು ಅಂಬಿಗಾ. ಎನ್ನ ಗಮ್ಮನೆ ತೆಗೆಯೋ ಅಂಬಿಗಾ. ತೊರೆದು ದಾಂಟಿಹೆನೆಂಬ ಭರವಸ ಕರಘನ, ಗಮ್ಮನೆ ತೆಗೆಯೋ ಅಂಬಿಗಾ. ಸಿರಿಶೈಲ ಚೆನ್ನಮಲ್ಲಿಕಾರ್ಜುನಾ ನಿನ್ನ ಕಾಣಲು ಬಂದಿಹೆ ಅಂಬಿಗಾ.

Thoughts & Reflections

0

No reflections shared yet. Be the first to share your thoughts!

Share your thought