ॐ
ತನ್ನ ವಿನೋದಕ್ಕೆ ತಾನೆ ಸೃಜಿಸಿದ ಸಕಲ ಜಗತ್ತ.
ತನ್ನ ವಿನೋದಕ್ಕೆ ತಾನೆ ಸುತ್ತಿದನದಕ್ಕೆ ಸಕಲ ಪ್ರಪಂಚನು.
ತನ್ನ ವಿನೋದಕ್ಕೆ ತಾನೆ ತಿರುಗಿಸಿದನನಂತ ಭವದುಃಖಂಗಳಲ್ಲಿ.
ಇಂತೆನ್ನ ಚೆನ್ನಮಲ್ಲಿಕಾರ್ಜುನನೆಂಬ ಪರಶಿವನು
ತನ್ನ ಜಗದ್ವಿಲಾಸ ಸಾಕಾದ ಮತ್ತೆ ತಾನೆ ಪರಿವನದರ ಮಾಯಾಪಾಶವನು.
Thoughts & Reflections
0No reflections shared yet. Be the first to share your thoughts!