ॐ
ತಾನು ದಂಡುಮಂಡಲಕ್ಕೆ ಹೋದಹೆನೆಂದಡೆ
ನಾನು ಸುಮ್ಮನಿಹೆನಲ್ಲದೆ,
ತಾನೆನ್ನ ಕೈಯೊಳಗಿದ್ದು ತಾನೆನ್ನ ಮನದೊಳಗಿದ್ದು
ಎನ್ನ ಕೂಡದಿದ್ದಡೆ ನಾನೆಂತು ಸೈರಿಸುವೆನವ್ವಾ ?
ನೆನಹೆಂಬ ಕುಂಟಿಣಿ ಚೆನ್ನಮಲ್ಲಿಕಾರ್ಜುನನ ನೆರಹದಿದ್ದಡೆ ನಾನೇವೆ ಸಖಿಯೆ ?
Thoughts & Reflections
0No reflections shared yet. Be the first to share your thoughts!