Bhasaka
← Back to home

ಧನದ ಮೇಲೆ ಬಂದವರೆಲ್ಲ ಅನುಸರಿಗಳಲ್ಲದೆ

Author: ಅಕ್ಕಮಹಾದೇವಿCategory: ವಚನಗಳು
ಧನದ ಮೇಲೆ ಬಂದವರೆಲ್ಲ ಅನುಸರಿಗಳಲ್ಲದೆ ಆಗುಮಾಡಬಂದವರಲ್ಲ. ಮನದ ಮೇಲೆ ಬಂದು ನಿಂದು ಜರೆದು ನುಡಿದು ಪಥವ ತೋರಬಲ್ಲಡಾತನೆ ಸಂಬಂಧಿ. ಹಾಗಲ್ಲದೆ ಅವರಿಚ್ಚೆಯ ನುಡಿದು ತನ್ನುದರವ ಹೊರೆವ ಬಚ್ಚಣಿಗಳ ಮಚ್ಚುವನೆ ಚೆನ್ನಮಲ್ಲಿಕಾರ್ಜುನ ?

Thoughts & Reflections

0

No reflections shared yet. Be the first to share your thoughts!

Share your thought