Bhasaka
← Back to home

ನಿತ್ಯತೃಪ್ತಂಗೆ ನೈವೇದ್ಯದ ಹಂಗೇತಕ್ಕೆ ?

Author: ಅಕ್ಕಮಹಾದೇವಿCategory: ವಚನಗಳು
ನಿತ್ಯತೃಪ್ತಂಗೆ ನೈವೇದ್ಯದ ಹಂಗೇತಕ್ಕೆ ? ಸುರಾಳ ನಿರಾಳಂಗೆ ಮಜ್ಜನದ ಹಂಗೇತಕ್ಕೆ ? ಸ್ವಯಂಜ್ಯೋತಿರ್ಮಯಂಗೆ ದೀಪಾರಾಧನೆಯ ಹಂಗೇತಕ್ಕೆ ? ಸುವಾಸನೆ ಸೂಕ್ಷ್ಮಗಂಧ ಕರ್ಪೂರಗೌರಂಗೆ ಪುಷ್ಪದ ಹಂಗೇತಕ್ಕೆ ? ಮಾಟದಲಿ ಮನ ನಂಬುಗೆಯಿಲ್ಲದ, ಅಹಂಕಾರಕ್ಕೀಡಾದ, ಭಕ್ತಿಯೆಂಬ ಪಸಾರವನಿಕ್ಕಿ ಹೊಲೆಹದಿನೆಂಟುಜನ್ಮವ ಹೊರೆವುದರಿಂದ ಅಂಗೈಯಲೊರಸಿ ಮುಕ್ತಿಯ ಮೂಲ ಶಿಖಿರಂಧ್ರದ ಕಾಮನ ಸುಟ್ಟು ಶುದ್ಭಸ್ಫಟಿಕ ಸ್ವಯಂಜ್ಯೋತಿಯನು ಸುನಾಳದಿಂದ ಹಂ ಕ್ಷಂ ಎಂಬೆರಡಕ್ಷರವ ಸ್ವಯಾನುಭಾವಭಕ್ತಿನಿರ್ವಾಣವಾದವರನೆನಗೊಮ್ಮೆ ತೋರಿದೆ. ಶ್ರೀಗಿರಿ ಚೆನ್ನ ಮಲ್ಲಿಕಾರ್ಜುನಾ.

Thoughts & Reflections

0

No reflections shared yet. Be the first to share your thoughts!

Share your thought