ॐ
ಪಡೆವುದರಿದು ನರಜನ್ಮವ,
ಪಡೆವುದರಿದು ಹರಭಕ್ತಿಯ,
ಪಡೆವುದರಿದು ಗುರುಕಾರುಣ್ಯವ,
ಪಡೆವುದರಿದು ಲಿಂಗಜಂಗಮಸೇವೆಯ,
ಪಡೆವುದರಿದು ಸತ್ಯಶರಣರನುಭಾವವ.
ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ
ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೆ.
Thoughts & Reflections
0No reflections shared yet. Be the first to share your thoughts!