Bhasaka
← Back to home

ಪಡೆವುದರಿದು ನರಜನ್ಮವ,

Author: ಅಕ್ಕಮಹಾದೇವಿCategory: ವಚನಗಳು
ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ, ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಲಿಂಗಜಂಗಮಸೇವೆಯ, ಪಡೆವುದರಿದು ಸತ್ಯಶರಣರನುಭಾವವ. ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೆ.

Thoughts & Reflections

0

No reflections shared yet. Be the first to share your thoughts!

Share your thought