Bhasaka
← Back to home

ಪ್ರಾಣ ಹೊಲ ಮೇರೆಯಲ್ಲಿ ಪ್ರಾಣ ಸತ್ತುದ ಕಂಡೆ ?

Author: ಅಕ್ಕಮಹಾದೇವಿCategory: ವಚನಗಳು
ಪ್ರಾಣ ಹೊಲ ಮೇರೆಯಲ್ಲಿ ಪ್ರಾಣ ಸತ್ತುದ ಕಂಡೆ ? ದೇವ ದಾನವ ಮಾನವರೆಲ್ಲಾ ಜೋಳವಾಳಿಯಲೈದಾರೆ. ಜಾಣಕಲುಕುಟಿಗನನಗಲದೆ ಹೂವನೆ ಕೊಯ್ದು, ಕಲಿಯುಗದ ಕರಸ್ಥಲದೇವಪೂಜೆ ಘನ. ಮೇರುವಿನ ಕುದುರೆ ನಲಿದಾಡಲದುಭುತ. ಜಾರಜಂಗುಳಿಗಳ ಜಗಳ ಮೇಳಾಪ, ಮರುಪತ್ತದ ಮಾತು, ನಗೆ ಹಗರಣ ? ಕ್ಷೀರಸಾಗರದಲ್ಲಿ ದಾರಿಯಳವಡದಯ್ಯಾ. ನೀ ಹೇಳಬೇಕು, ಭಕ್ತರೆಂತಿಪ್ಪರೊ ? ಪಂಚವರ್ಣದ ಬಣ್ಣ ಸಂತೆಯ ಪರದಾಟವು ಚೆನ್ನಮಲ್ಲಿಕಾರ್ಜುನಯ್ಯಾ, ತ್ರಿಭುವನದ ಹೆಂಡಿರ ನೀರಹೊಳೆಯಲ್ಲಿರಿಸಿತ್ತು.

Thoughts & Reflections

0

No reflections shared yet. Be the first to share your thoughts!

Share your thought