Bhasaka
← Back to home

ಭೃತ್ಯನಾದ ಬಳಿಕ ಕರ್ತೃವಿಂಗೆ ಉತ್ತಮ ವಸ್ತುವನೀಯಬೇಕು,

Author: ಅಕ್ಕಮಹಾದೇವಿCategory: ವಚನಗಳು
ಭೃತ್ಯನಾದ ಬಳಿಕ ಕರ್ತೃವಿಂಗೆ ಉತ್ತಮ ವಸ್ತುವನೀಯಬೇಕು, ಇದೇ ಕರ್ತೃಭೃತ್ಯರ ಭೇದ. ಲಿಂಗಭಕ್ತನಾದಡೆ ಜಂಗಮಪಾದತೀರ್ಥಪ್ರಸಾದವ ಲಿಂಗಕ್ಕೆ ಮಜ್ಜನ ಭೋಜನ ನೈವೇದ್ಯವ ಮಾಡಿ, ಪ್ರಸಾದವ ಕೊಳ್ಳಬೇಕು. ಇದೇ ವರ್ಮ, ಇದೇ ಧರ್ಮ ಕಾಣಾ ಚೆನ್ನಮಲ್ಲಿಕಾರ್ಜುನಾ.

Thoughts & Reflections

0

No reflections shared yet. Be the first to share your thoughts!

Share your thought