ॐ
ಮರಮರ ಮಥನಿಸಿ ಕಿಚ್ಚು ಹುಟ್ಟಿ
ಸುತ್ತಣ ತರುಮರಾದಿಗಳ ಸುಡಲಾಯಿತ್ತು.
ಆತ್ಮ ಆತ್ಮ ಮಥನಿಸಿ ಅನುಭಾವ ಹುಟ್ಟಿ
ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು.
ಇಂತಪ್ಪ ಅನುಭಾವರ ಅನುಭಾವವ ತೋರಿ
ಎನ್ನ ಒಡಲನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ.
Thoughts & Reflections
0No reflections shared yet. Be the first to share your thoughts!