Bhasaka
← Back to home

ಮರೆದೊರಗಿ, ಕನಸ ಕಂಡು ಹೇಳುವಲ್ಲಿ

Author: ಅಕ್ಕಮಹಾದೇವಿCategory: ವಚನಗಳು
ಮರೆದೊರಗಿ, ಕನಸ ಕಂಡು ಹೇಳುವಲ್ಲಿ ಸತ್ತ ಹೆಣ ಎದ್ದಿತ್ತು. ತನ್ನ ಋಣ ನಿಧಾನ ಎದ್ದು ಕರೆಯಿತ್ತು. ಹೆಪ್ಪಿಟ್ಟ ಹಾಲು ಗಟ್ಟಿತುಪ್ಪಾಗಿ ಸಿಹಿಯಾಯಿತ್ತು. ಇದಕ್ಕೆ ತಪ್ಪ ಸಾಧಿಸಲೇಕೆ ಚೆನ್ನಮಲ್ಲಿಕಾರ್ಜುನದೇವರ ದೇವನಣ್ಣಗಳಿರಾ ?

Thoughts & Reflections

0

No reflections shared yet. Be the first to share your thoughts!

Share your thought