ॐ
ಮಧ್ಯಾಹ್ನದಿಂದ ಮೇಲೆ ಹಿರಿಯರಿಲ್ಲ.
ಅಸ್ತಮಾನದಿಂದ ಮೇಲೆ ಜಿತೇಂದ್ರಿಯರಿಲ್ಲ.
ವಿಧಿಯ ಮೀರುವ ಅಮರರಿಲ್ಲ.
ಕ್ಷುಧೆ ವಿಧಿ ವ್ಯಸನಕ್ಕಂಜಿ,
ನಾ ನಿಮ್ಮ ಮರೆಹೊಕ್ಕು ಬದುಕಿದೆನು ಚೆನ್ನಮಲ್ಲಿಕಾರ್ಜುನಾ.
Thoughts & Reflections
0No reflections shared yet. Be the first to share your thoughts!