Bhasaka
← Back to home

ಮನವೆಲ್ಲಾ ಕಲ್ಪತರು, ಗಿಡವೆಲ್ಲಾ ಮರುಜವಣಿ,

Author: ಅಕ್ಕಮಹಾದೇವಿCategory: ವಚನಗಳು
ಮನವೆಲ್ಲಾ ಕಲ್ಪತರು, ಗಿಡವೆಲ್ಲಾ ಮರುಜವಣಿ, ಶಿಲೆಗಳೆಲ್ಲಾ ಪರುಷ, ನೆಲವೆಲ್ಲಾ ಅವಿಮುಕ್ತಿಕ್ಷೇತ್ರ. ಜಲವೆಲ್ಲಾ ನಿರ್ಜರಾಮೃತ, ಮೃಗವೆಲ್ಲಾ ಪುರುಷಾಮೃಗ, ಎಡಹುವ ಹರಳೆಲ್ಲಾ ಚಿಂತಾಮಣಿ. ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ, ನೋಡುತ್ತ ಬಂದು ಕದಳಿಯ ಬನವ ಕಂಡೆ ನಾನು.

Thoughts & Reflections

0

No reflections shared yet. Be the first to share your thoughts!

Share your thought