Bhasaka
← Back to home

ವಾನರಂಗಳಿಗೆ ಭೈತ್ರ ತಪ್ಪಿಬಂದಡೆ

Author: ಅಕ್ಕಮಹಾದೇವಿCategory: ವಚನಗಳು
ವಾನರಂಗಳಿಗೆ ಭೈತ್ರ ತಪ್ಪಿಬಂದಡೆ ಮುತ್ತು ಮಾಣಿಕ್ಯ ನವರತ್ನದ ಪೆಟ್ಟಿಗೆಗಳು ಸಾರಿದವು. ಸಾರಿದಡೆ ಆ ವಾನರಂಗಳು ಬಲ್ಲವೆ ಮುತ್ತಿನ ರಕ್ಷೆಯ ? ನವರತ್ನದ ಪೆಟ್ಟಿಗೆಯ ತೆರದು ನೋಡಿ, ಕೆಯ್ಕೊಂಡು, ವಾನರಂಗಳು ಮೆದ್ದು ನೋಡಿ, ಹಣ್ಣಲ್ಲವೆಂದು ಬಿಟ್ಟು ಕಳದವು. ಲೋಕದೊಳಗೆ ಶರಣ ಸುಳಿದಡೆ, ಆ ಶರಣನ ನಡೆ ನುಡಿ ಚಾರಿತ್ರವ ಕರ್ಮಿಗಳೆತ್ತ ಬಲ್ಲರು ? ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರ ಇರವನು ನಿಮ್ಮ ಶರಣರು ಬಲ್ಲರಲ್ಲದೆ ಆ ವಾನರನಂತಹ ಮನುಜರೆತ್ತ ಬಲ್ಲರು.

Thoughts & Reflections

0

No reflections shared yet. Be the first to share your thoughts!

Share your thought