Bhasaka
← Back to home

ಲಿಂಗಾಂಗಸಂಗಸಮರಸಸುಖದಲ್ಲಿ ಮನ ವೇದ್ಯವಾಯಿತ್ತು.

Author: ಅಕ್ಕಮಹಾದೇವಿCategory: ವಚನಗಳು
ಲಿಂಗಾಂಗಸಂಗಸಮರಸಸುಖದಲ್ಲಿ ಮನ ವೇದ್ಯವಾಯಿತ್ತು. ನಿಮ್ಮ ಶರಣರ ಅನುಭಾವಸಂಗದಿಂದ ಎನ್ನ ತನು ಮನ ಪ್ರಾಣ ಪದಾರ್ಥವ ಗುರುಲಿಂಗಜಂಗಮಕ್ಕಿತ್ತು, ಶುದ್ಧಸಿದ್ಧಪ್ರಸಿದ್ಧಪ್ರಸಾದಿಯಾದೆನು. ಆ ಮಹಾಪ್ರಸಾದದ ರೂಪು ರುಚಿ ತೃಪ್ತಿಯ ಇಷ್ಟ ಪ್ರಾಣ ಭಾವಲಿಂಗದಲ್ಲಿ ಸಾವಧಾನದಿಂದರ್ಪಿಸಿ ಮಹಾಘನಪ್ರಸಾದಿಯಾದೆನು. ಇಂತೀ ಸರ್ವಾಚಾರಸಂಪತ್ತು ಎನ್ನ ತನುಮನ ವೇದ್ಯವಾಯಿತ್ತು. ಇನ್ನೆಲ್ಲಿಯಯ್ಯಾ, ಎನಗೆ ನಿಮ್ಮಲ್ಲಿ ನಿರವಯವು ? ಇನ್ನೆಲ್ಲಿಯಯ್ಯಾ ನಿಮ್ಮಲ್ಲಿ ಕೂಡುವುದು ? ಪರಮಸುಖದ ಪರಿಣಾಮ ಮನಮೇರೆದಪ್ಪಿ ನಾನು ನಿಜವನೈದುವ ಠಾವ ಹೇಳಾ ಚೆನ್ನಮಲ್ಲಿಕಾರ್ಜುನ ಪ್ರಭುವೆ ?

Thoughts & Reflections

0

No reflections shared yet. Be the first to share your thoughts!

Share your thought