Bhasaka
← Back to home

ಸಪ್ತಧಾತುಗಳಿಂದ ಬಳಸಲ್ಪಟ್ಟ ಈ ಶರೀರವೆ

Author: ಅಕ್ಕಮಹಾದೇವಿCategory: ವಚನಗಳು
ಸಪ್ತಧಾತುಗಳಿಂದ ಬಳಸಲ್ಪಟ್ಟ ಈ ಶರೀರವೆ ಶಿವನ ಪಟ್ಟಣವೆಂದು ಹೇಳಲ್ಪಟ್ಟಿತ್ತು. ಈ ಪಿಂಡವೆಂಬ ಪಟ್ಟಣದಲ್ಲಿ ಸೂಕ್ಷ್ಮವಾದಂಥಧಾರಾಕಾಶದಿಂದ ಮನೋಹರವಾಗಿದ್ದ ಹೃದಯಕಮಲವೆ ಅಂತಃಪುರವು. ಅಲ್ಲಿ ನಿತ್ಯಪರಿಪೂರ್ಣತ್ವದಿಂದ ಸಿದ್ಧನಾಗಿ ಸಚ್ಚಿದಾನಂದವೇ ಕುರುಹಾಗುಳ್ಳ ಪರಮಶಿವನು ಜಲದಲ್ಲಿ ತೋರುತ್ತಿರ್ದ ಆಕಾಶದೋಪಾದಿಯಲ್ಲಿ ಪ್ರತ್ಯಕ್ಷವಾಗಿ ಪ್ರಕಾಶವೇ ಸ್ವರೂಪವಾಗುಳ್ಳಾತನಾಗಿ ಇರುತಿರ್ದನು. ಆ ಜಲಮಧ್ಯದಲ್ಲಿಯ ಆಕಾಶ ಬಿಂಬದಲ್ಲಿರುತಿರ್ದ ಘಟಾಕಾಶದೋಪಾದಿಯಲ್ಲಿ ಖಂಡಿತನಾಗಿರ್ದ ಚಿದ್ರೂಪನಾದ ಶಿವನನು ಭಾವಿಸುವುದಯ್ಯ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.

Thoughts & Reflections

0

No reflections shared yet. Be the first to share your thoughts!

Share your thought