ॐ
ಸರ್ಪನ ಬಾಯ ಕಪ್ಪೆ ನೊಣಕ್ಕೆ ಹಾರುವಂತೆ
ಆಪ್ಯಾಯನ ಬಿಡದು.
ಕಾಯವರ್ಪಿತವೆಂಬ ಹುಸಿಯ ನೋಡಾ.
ನಾನು ಭಕ್ತಳೆಂಬ ನಾಚಿಕೆಯ ನೋಡಾ.
ನಾನು ಯುಕ್ತಳೆಂಬ ಹೇಸಿಕೆಯ ನೋಡಾ.
ಓಗರವಿನ್ನಾಗದು, ಪ್ರಸಾದ ಮುನ್ನಿಲ್ಲ ;
ಚೆನ್ನಮಲ್ಲಿಕಾರ್ಜುನಯ್ಯ ಉಪಚಾರದರ್ಪಿತವನವಗಡಿಸಿ ಕಳೆವ
Thoughts & Reflections
0No reflections shared yet. Be the first to share your thoughts!