ॐ
ಹರನೆ ನೀನೆನಗೆ ಗಂಡನಾಗಬೇಕೆಂದು
ಅನಂತಕಾಲ ತಪಸ್ಸಿದ್ದೆ ನೋಡಾ.
ಹಸೆಯಮೇಲಣ ಮಾತ ಬೆಸಗೊಳಲಟ್ಟಿದಡೆ,
ಶಶಿಧರನ ಹತ್ತಿರಕೆ ಕಳುಹಿದರೆಮ್ಮವರು.
ಭಸ್ಮವನೆ ಹೂಸಿ, ಕಂಕಣವನೆ ಕಟ್ಟಿದರು
ಚೆನ್ನಮಲ್ಲಿಕಾರ್ಜುನ ತನಗೆ ನಾನಾಗಬೇಕೆಂದ.
Thoughts & Reflections
0No reflections shared yet. Be the first to share your thoughts!