Bhasaka
← Back to home

ಹಸಿವು ತೃಷೆಯಾದಿಗಳು ಎನ್ನೊಳಗಾದ ಬಳಿಕ,

Author: ಅಕ್ಕಮಹಾದೇವಿCategory: ವಚನಗಳು
ಹಸಿವು ತೃಷೆಯಾದಿಗಳು ಎನ್ನೊಳಗಾದ ಬಳಿಕ, ವಿಷಯ ವಿಕಾರವೆನ್ನನಿರಿಸಿ ಹೋದವು ಕಾಣಾ ತಂದೆ. ಅದೇ ಕಾರಣ ನೀವು ಅರಸಿಕೊಂಡು ಬಂದಿರಣ್ಣ. ನೀವು ಅರಸುವ ಅರಕೆ - ಎನ್ನೊಳಗಾಯಿತ್ತು. ಎನ್ನ ದೇವ ಚೆನ್ನಮಲ್ಲಿಕಾರ್ಜುನ ತನ್ನೊಳಗೆನ್ನನಿಂಬಿಟ್ಟುಕೊಂಡನಾಗಿ ಇನ್ನು ನಿನ್ನ ತಂದೆ ತಾಯಿತನವನೊಲ್ಲೆ ನಾನು.

Thoughts & Reflections

0

No reflections shared yet. Be the first to share your thoughts!

Share your thought