Bhasaka
← Back to home

ಹೂವು ಕಂದಿದಲ್ಲಿ ಪರಿಮಳವನರಸುವರೆ ?

Author: ಅಕ್ಕಮಹಾದೇವಿCategory: ವಚನಗಳು
ಹೂವು ಕಂದಿದಲ್ಲಿ ಪರಿಮಳವನರಸುವರೆ ? ಕಂದನಲ್ಲಿ ಕುಂದನರಸುವರೆ ? ಎಲೆ ದೇವ, ಸ್ನೇಹವಿದ್ದ ಠಾವಿನೊಳು ದ್ರೋಹವಾದ ಬಳಿಕ ಮರಳಿ ಸದ್ಗುಣವನರಸುವರೆ ? ಎಲೆ ದೇವ, ಬೆಂದ ಹುಣ್ಣಿಗೆ ಬೇಗೆಯನಿಕ್ಕುವರೆ ? ಕೇಳಯ್ಯಾ, ಶ್ರೀಶೈಲ ಚೆನ್ನಮಲ್ಲಿಕಾರ್ಜುನಾ ಹೊಳೆಯಿಳಿದ ಬಳಿಕ ಅಂಬಿಗಂಗೇನುಂಟು ?

Thoughts & Reflections

0

No reflections shared yet. Be the first to share your thoughts!

Share your thought