ॐ
ಹೆದರದಿರು ಮನವೆ, ಬೆದರದಿರು ತನುವೆ,
ನಿಜವನರಿತು ನಿಶ್ಚಿಂತನಾಗಿರು.
ಫಲವಾದ ಮರನ ಕಲ್ಲಲಿ ಇಡುವುದೊಂದು ಕೋಟಿ,
ಎಲವದಮರನ ಇಡುವರೊಬ್ಬರ ಕಾಣೆ.
ಭಕ್ತಿಯುಳ್ಳವರ ಬೈವರೊಂದುಕೋಟಿ,
ಭಕ್ತಿಯಿಲ್ಲದವರ ಬೈವರೊಬ್ಬರ ಕಾಣೆ.
ನಿಮ್ಮ ಶರಣರ ನುಡಿಯೆ ಎನಗೆ ಗತಿ, ಸೋಪಾನ, ಚೆನ್ನಮಲ್ಲಿಕಾರ್ಜುನಾ.
Thoughts & Reflections
0No reflections shared yet. Be the first to share your thoughts!