ॐ
ಅಂಗದ ಮೇಲೆ ಲಿಂಗ ಆಯತವಾಗಿ ಲಿಂಗಾರ್ಚನೆಯ ಮಾಡಿದಡೆ ಭವ ಹಿಂಗದೆಂದು,
ಪ್ರಾಣದ ಮೇಲೆ ಲಿಂಗ[ಸ್ವಾ]ಯತವ ಮಾಡಿ ಎನ್ನಂತರಂಗ ಶುದ್ಧವ ಮಾಡಿ ಲಿಂಗೈಕ್ಯದ ಹೊಲಬ ತೋರಿದನಯ್ಯಾ,
ಚೆನ್ನಬಸವಣ್ಣನು. ಕಾಯದ ಕಳವಳವು ದಾಸೋಹದ ಮುಖದಲ್ಲಿ ಅಲ್ಲದೆ ಹರಿಯದೆಂದು
ಜಂಗಮಮುಖಲಿಂಗವಾಗಿ ಬಂದು ಎನ್ನ ಶಿಕ್ಷಿಸಿ ರಕ್ಷಿಸಿ ಎನ್ನ ಸಂಸಾರದ ಪ್ರಕೃತಿಯ ಹರಿದನಯ್ಯಾ, ಪ್ರಭುದೇವರು.
ಕೂಡಲಸಂಗಮದೇವರಲ್ಲಿ ಪ್ರಭುದೇವರ ಚೆನ್ನಬಸವಣ್ಣನ ಕರುಣದಿಂದಲಾನು ಬದುಕಿದೆನು.
Thoughts & Reflections
0No reflections shared yet. Be the first to share your thoughts!