ॐ
ಅಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ
ಲೀಯವಾಯಿತ್ತೆಂದಡೆ ಅಂಗವ ಲಿಂಗದಲ್ಲಿ ಮತ್ತೆ ನಿಕ್ಷೇಪಿಸಿಹೆನೆಂಬ
ಕಾರಣವೇಕಯ್ಯಾ ಶರಣಂಗೆ ಪ್ರಾಣನ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ
ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿ ಎಂತು ಹೇಳಯ್ಯಾ ಕೂಡಲಸಂಗಮದೇವಾ,
ನಿಮ್ಮ ಶರಣರು ಕಾಯವಿಡಿದಿರ್ದು ನಿರ್ಮಾಯವಾಗಿರ್ಪುದ ಹೇಳಯ್ಯಾ ನಿಮ್ಮ ಧರ್ಮ.
Thoughts & Reflections
0No reflections shared yet. Be the first to share your thoughts!