Bhasaka
← Back to home

ಅರಿವಿನ ಆಪ್ಯಾಯನಕ್ಕೆ ಅನುಭಾವವೆ ತೃಪ್ತಿ,

Author: ಬಸವಣ್ಣCategory: ವಚನಗಳು
ಅರಿವಿನ ಆಪ್ಯಾಯನಕ್ಕೆ ಅನುಭಾವವೆ ತೃಪ್ತಿ, ಅರಿವು ನೆರೆ ಕೂಡಿ, ಆ[ಚಾ]ರವೆ ಪ್ರಾಣವಾಗಿ ವಿಶ್ರಮಿಸಿದ ಬಳಿಕ, ಶ್ರೀಗುರು ಕೃಪೆಯ ಮಾಡಿದ ಪ್ರಾಣಲಿಂಗದ ಘನವೆಂತೆಂದಡೆ: ಮತ್ಸ್ಯನುಂಗಿದ ಮಾಣಿಕ್ಯದಂತೆ, ಮುತ್ತುನುಂಗಿದ ನೀರಿನಂತೆ, ಕಣ್ಣಾಲಿ ನುಂಗಿದ ನೋಟದಂತೆ, ಬಯಲನೊಳಕೊಂಡ ಬ್ರಹ್ಮಾಂಡದೊಳಗಿಪ್ಪ ಸ್ವಯಾನುಭಾವಿಗಳ ಅನುಭಾವವ ತೋರಿ ಬದುಕಿಸಾ, ಕೂಡಲಸಂಗಮದೇವಾ

Thoughts & Reflections

0

No reflections shared yet. Be the first to share your thoughts!

Share your thought