Bhasaka
← Back to home

ನೀನೇ ಅನಾಥಬಂಧು ಕಾರುಣ್ಯಸಿಂಧು

Author: ಪುರಂದರದಾಸCategory: ಶ್ರೀಕೃಷ್ಣRaaga: ಬಿಭಾಸTaala: ತ್ರಿತಾಲ
ನೀನೇ ಅನಾಥಬಂಧು ಕಾರುಣ್ಯಸಿಂಧು ॥ ಪತಿಗಳೈವರಿದ್ದರೇನು ಸತಿಯ ಭಂಗ ಬಿಡಿಸಲಿಲ್ಲ ಗತಿ ನೀನೇ ಮುಕುಂದನೆಂದರೆ ಅತಿ ವೇಗದಿ ಬಂದೊದಗಿದೆ ಕೃಷ್ಣಾ॥ ಶಿಲೆಯ ಮೆಟ್ಟಿ ಕುಲಕೆ ತಂದೆ ಬಲಿಯ ಬೇಡಿ ಸತ್ಪದವಿಯನಿತ್ತೆ ಸುಲಭದಿ ಭಜಿಸುವ ಭಕ್ತರ ಸಲಹುವ ನಮ್ಮ ಚೆಲುವ ಪುರಂದರ ವಿಠ್ಠಲರಾಯ ॥

Thoughts & Reflections

0

No reflections shared yet. Be the first to share your thoughts!

Share your thought