Bhasaka
← Back to home

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ

Author: ಕನಕದಾಸCategory: ಶ್ರೀಕೃಷ್ಣRaaga: ಅಢಾಣಾTaala: ಝಂಪೆತಾಳ
ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ ॥ ಪರಮಪದದೊಳಗೆ ವಿಷಧರನ ತಲ್ಪದಲಿ ನೀ ಸಿರಿ ಸಹಿತ ಕ್ಲೀರವಾರಿಧಿಯೊಳಿರಲು ಕರಿರಾಜ ಕಷ್ಟದಲಿ ಆದಿಮೂಲ ಎಂದು ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೇ ॥ ಕಡುಕೋಪದಿಂ ಖಳನು ಖಡ್ಗವನೆ ಪಿಡಿದು ನಿ ನ್ನೊಡೆಯನೆಲ್ಲಿಹನೆಂದು ನುಡಿಯೆ ದೃಢಭಕುತಿಯಲಿ ಶಿಶುವು ಬಿಡನೆ ನಿನ್ನನು ಭಜಿಸೆ ಸಡಗರದಿ ಸ್ತಂಭದಿಂದೊಡೆದೆ ನರಹರಿಯೇ ॥ ಯಮಸುತನ ರಾಣಿಗಕ್ಷಯವಸನವನಿತ್ತೆ ಸಮಯದಲಿ ಅಜಮಿಳನ ಪೊರೆದೆ ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ ಕಮಲಾಕ್ಷ ಕಾಗಿನೆಲೆಯಾದಿ ಕೇಶವನೇ ॥

Thoughts & Reflections

0

No reflections shared yet. Be the first to share your thoughts!

Share your thought