← Back to home
ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
Author: ಕನಕದಾಸCategory: ಶ್ರೀಕೃಷ್ಣRaaga: ಅಢಾಣಾTaala: ಝಂಪೆತಾಳ
ॐ
ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ ॥
ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿ ಸಹಿತ ಕ್ಲೀರವಾರಿಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೇ ॥
ಕಡುಕೋಪದಿಂ ಖಳನು ಖಡ್ಗವನೆ ಪಿಡಿದು ನಿ
ನ್ನೊಡೆಯನೆಲ್ಲಿಹನೆಂದು ನುಡಿಯೆ
ದೃಢಭಕುತಿಯಲಿ ಶಿಶುವು ಬಿಡನೆ ನಿನ್ನನು ಭಜಿಸೆ
ಸಡಗರದಿ ಸ್ತಂಭದಿಂದೊಡೆದೆ ನರಹರಿಯೇ ॥
ಯಮಸುತನ ರಾಣಿಗಕ್ಷಯವಸನವನಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿ ಕೇಶವನೇ ॥
Thoughts & Reflections
0No reflections shared yet. Be the first to share your thoughts!