ॐ
ಸುಜ್ಞಾನಿಯಾದವಂಗೆ ಮರಹು ತಾನೆಲ್ಲಿಯದೊ ?
ನಾನರಿದೆನೆಂಬಾತ ಇದಿರ ಕೇಳಲುಂಟೆ ?
ಭ್ರಾಂತಿನ ಭ್ರಮೆಯೊಳಗೆ ಬಳಲುತ್ತಿರಲು
ಮಾತಿನ ಮಾತಿನೊಳಗೆ ಅರಿವೆಂಬುದುಂಟೆ ?
ಸೂತಕ ಹಿಂಗದೆ ಸಂದೇಹವಳಿಯದೆ,
ಮುಂದಣ ಸೂಕ್ಷ್ಮವ ಕಾಬ ಪರಿಯೆಂತೊ?
ಜ್ಯೋತಿಯ ಬಸಿರೊಳಗೆ ಜನಿಸಿದ
ಕಾಂತಿಯುತ ಬೆಳಗು ಗುಹೇಶ್ವರಾ ನಿಮ್ಮ ಶರಣ !
Thoughts & Reflections
0No reflections shared yet. Be the first to share your thoughts!