ॐ
ಹುವ್ವ ತರುವರ ಮನೆಗೆ ಹುಲ್ಲ ತರುವ ಅವ್ವ ಲಕುಮೀರಮಣ ಇವಗಿಲ್ಲ ಗರುವ||
ಒಂದು ದಳ ಶ್ರೀತುಳಸಿ ಬಿಂದು ಗಂಗೋದಕವ ಇಂದಿರಾರಮಣಗೆ ಅರ್ಪಿತವೆನುತ| ಒಂದೇ ಮನಸಿನಲಿ ಸಿಂಧುಶಯನ ಎನೆ ಎಂದೆಂದು ವಾಸಿಪನಾ ಮಂದಿರದೊಳಗೆ||
ಪಾಂಡವರ ಮನೆಯೊಳಗೆ ಕುದುರೆಗಳ ತಾ ತೊಳೆದು ಪುಂಡರೀಕಾಕ್ಷ ತಾ ಹುಲ್ಲನು ತಿನಿಸಿ| ಅಂಡಜವಾಹನ ನಮ್ಮ ಪುರಂದರವಿಟ್ಠಲನು ತೊಂಡರಿಗೆ ತೊಂಡನಾಗಿ ಸಂಚರಿಸುತಿಹನು||
----ಪುರಂದರದಾಸ
Thoughts & Reflections
0No reflections shared yet. Be the first to share your thoughts!