Bhasaka
← Back to home

ಆ ವೇಳೆಯಲಿ ಆರಾರ ಕಾಯ್ದೆಯೊ ದೇವ

Author: ಕನಕದಾಸCategory: ಶ್ರೀಕೃಷ್ಣRaaga: ಪೂರ್ವೀTaala: ಝಂಪೆತಾಳ
ಆ ವೇಳೆಯಲಿ ಆರಾರ ಕಾಯ್ದೆಯೊ ದೇವ ಈ ವೇಳೆಯಲಿ ಎನ್ನ ಕಾಯ್ದರದು ನಿಜವಹುದು ||ಪ|| ಕರೆಯೆ ಕಂಬದಿ ಬಂದು ಹಿರಣ್ಯಕಶಿಪುವ ಕೊಂದೆ ಶರಣನನು ಪಾಲಿಸುತೆ ಕಾಯ್ದೆಯಂತೆ ಕರಿರಾಜ ಹರಿಯೆಂದು ಕರೆಯಲಾಕ್ಷಣ ಬಂದು ಕರುಣದಿಂದಲಿ ಕಾಯ್ದೆಯಂತೆ ಹರಿಯೆ ||1|| ಧರೆಗಧಿಕನಾಥನಾ ತೊಡೆಯನೇರಲು ಕಂಡು ಜರೆಯಲಾ ಧ್ರುವನ ನೀ ಕಾಯ್ದೆಯಂತೆ ದುರುಳ ದುಃಶಾಸನ ದ್ರೌಪದಿಯ ಸೀರೆಯ ಸೆಳೆಯೆ ತರುಣಿಗಕ್ಷಯವಿತ್ತು ಕಾಯ್ದೆಯಂತೆ ಹರಿಯೆ ||2|| ಅಂದು ರಾವಣ ವಿಭೀಷಣನ ನೂಕಲು ಕಂಡು ಇಂದಿರಾರಮಣ ನೀ ಕಾಯ್ದೆಯಂತೆ ಮಂದರೋದ್ಧರ ಮಧುಸೂದನ ಮಾಧವ ಗೋ ವಿಂದ ರಕ್ಷಿಸು ಬಾಡದಾದಿಕೇಶವರಾಯ ||3|

Thoughts & Reflections

0

No reflections shared yet. Be the first to share your thoughts!

Share your thought