Bhasaka
← Back to home

ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು

Author: ಕನಕದಾಸCategory: ಶ್ರೀಕೃಷ್ಣRaaga: ಮುಖಾರಿTaala: ಝಂಪೆತಾಳ
ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು ಪದುಮನಾಭನ ಪಾದದೊಲುಮೆ ಎನಗಾಯಿತು ಹರಿತೀರ್ಥ ಪ್ರಸಾದ ಎನ್ನ ಜಿಹ್ವೆಗೊದಗಿತು ಹರಿಯ ನಾಮಾಮೃತ ಕಿವಿಗೊದಗಿತು ಹರಿಯ ದಾಸರು ಎನ್ನ ಬಂಧು ಬಳಗವಾದರು ಹರಿಯ ಶ್ರೀಮುದ್ರೆ ಆಭರಣವಾಯ್ತು ||1|| ಮುಕುತರಾದರು ಎನ್ನ ನೂರೊಂದು ಕುಲದವರು ಮುಕುತಿ ಮಾರ್ಗಕೆ ಯೋಗ್ಯ ನಾನಾದೆನೊ ಅಕಳಂಕ ಶ್ರೀಹರಿ ಭಕುತಿಗೆನ್ನ ಮನ ಬೆಳೆದು ರುಕುಮಿಣಿಯರಸ ಕೈವಶನಾದನೆನಗೆ ||2|| ಇಂದೆನ್ನ ಜೀವಕ್ಕು ಸಕಲ ಸಂಪದವಾಯ್ತು ಮುಂದೆನ್ನ ಜನ್ಮ ಸಫಲವಾಯಿತು ತಂದೆ ಶ್ರೀ ಕಾಗಿನೆಲೆಯಾದಿಕೇಶವರಾಯ ಬಂದೆನ್ನ ಹೃದಯದಲಿ ನೆಲೆಯಾಗಿ ನಿಂತ ||3||

Thoughts & Reflections

0

No reflections shared yet. Be the first to share your thoughts!

Share your thought