ॐ
ತಲ್ಲಣಿಸದಿರು ಕಂಡ್ಯ ತಾಳು ಮನವೇ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ||
ಬೆಟ್ಟದ ತುದಿಯಲ್ಲಿ ಹುಟ್ಟಿರುವ ವೃಕ್ಷಕ್ಕೆ
ಕಟ್ಟೆಯನು ಕಟ್ಟಿ ನೀರೆರೆದವರು ಯಾರೋ |
ಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು
ಘಟ್ಯಾಗಿ ಸಲಹುವನು ಇದಕೆ ಸಂಶಯಬೇಡ ||
ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲ
ಅಡಿಗಡಿಗೆ ಆಹಾರವಿತ್ತವರು ಯಾರೋ |
ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿ
ಬಿಡದೆ ರಕ್ಷಿಪನಿದಕೆ ಸಂದೇಹ ಬೇಡ ||
ಕಲ್ಲೊಳಗೆ ಹುಟ್ಟಿರುವ ಕ್ರಿಮಿಕೀಟಗಳಿಗೆಲ್ಲ
ಅಲ್ಲಲ್ಲಿ ಆಹಾರವಿತ್ತವರು ಯಾರೋ ।
ಫುಲ್ಲಲೋಚನ ಕಾಗಿನೆಲೆಯಾದಿಕೇಶವನು
ಎಲ್ಲರನು ಸಲಹುವನು ಇದಕೆ ಸಂಶಯಬೇಡ ||
Thoughts & Reflections
0No reflections shared yet. Be the first to share your thoughts!