Bhasaka
← Back to home

ಅನ್ಯಾಯದಲಿ ಬಾಳಿ ಬದಕೋರೆ

Author: ವಿಜಯದಾಸCategory: ಶ್ರೀಕೃಷ್ಣ
ಅನ್ಯಾಯದಲಿ ಬಾಳಿ ಬದಕೋರೆ | ನಾಳೆ | ಕಿನ್ನೇಶದೂತರು ಎಳಿಯಾರೆ ಹಿಂದಿನ ದುಃಖವ ನೆನಸಿಕೊ | ನೀನು | ಬಂದದೆ ಒಂದೊಂದು ಗುಣಿಸಿಕೊ | ಮುಂದೀಗ ಎಚ್ಚತ್ತು ನೋಡಿಕೊ | ಇದು ಸಂದೇಹವೆನದೆ ನಿಜವಾಗಿ ತಿಳಿದಕೊ ||1|| ಗರ್ಭಯಾತನೆ ಬಲು ಹೇಸಿಕೆ | ವಳಗೆ | ನಿರ್ಬಂಧವಾಗಿ ಬೆಳೆದು ಮೇಲಕೆ | ದೊಬ್ಬುವರು ನಿನ್ನ ಕೆಳಿಯಿಕೆ | ಬಿದ್ದು ಅಬ್ಬಬ್ಬ ಐಯ್ಯಯ್ಯವೆಂದು ಅಳಲೇಕೆ||2|| ಬಾಯಿಗೆ ಬಜೆ ಬೆಣ್ಣೆ ಕೊಡುವರು | ತಾಯಿ | ಬಳಗವೆಲ್ಲ ಸಂತೋಷಬಡುವರು | ಆಯಿತು ಮಗುವೆಂದು ನುಡಿವರು | ಇವನ ಆಯುಷ್ಯ ಕಡಿಮೆಯೆಂದದು | ಅರಿಯದೆ ಕೆಡುವರು ||3|| ಚಿಕ್ಕಂದು ಎತ್ತಿ ಮುದ್ದಾಡಿ ಬೆಳಸಿ | ಅಕ್ಕರದಿಂದಲಿ ನೋಡಿ ಕೊಂಡಾಡಿ | ಫಕ್ಕನೆ ಕುಲಗೋತ್ರರ ಕೂಡಿ | ಒಬ್ಬ | ರಕ್ಕಸಿಯ ತಂದು ನಿನಗೆ ಜತಿ ಮಾಡಿ ||4|| ನೆಲೆ ಇಲ್ಲದ ಮಮತೆಯೊಳು | ಮುಳುಗಿ | ತಲೆಕೆಳಗಾಗಿ ನಡೆದು ಹಗಳಿರುಳು | ಕುಲನಾಶಕನೆಂಬೊದು ಬಾಳು | ಬಿಡು | ತಿಳಿಯ ಪೇಳುವೆನು ಎತಾರ್ಥವ ಕೇಳು||5|| ದುರ್ವಾಸನೆ ನಾರುವ ಬೀಡು | ಇದು | ಸ್ಥಿರವಲ್ಲ ಎಂದಿಗು ಹಂಬಲ ಬಿಡು | ಹರಿದಾಸರ ಸಂಗ ಮಾಡು | ಇನ್ನು | ಹರಿನಾಮಗಳ ಕೊಂಡಾಡು ||6|| ಆವಾವ ಜನ್ಮದಲಿ ನೀನು | ಒಮ್ಮೆ | ದೇವ ಎಂದೆನಲಿಕ್ಕೆ ನಾಲಿಗಿತ್ತೇನು | ಈ ಉತ್ತಮವಾದ ಈ ತನು | ಬಂತು | ಕೋವಿದನಾಗಿ ಶ್ರೀ ಹರಿಯನ್ನು ಕಾಣು||7|| ಆ ಮರ ಈ ಮರ ಎನಲಾಗಿ | ಅವನ | ತಾಮಸದ e್ಞÁನ ಪರಿಹಾರವಾಗಿ | ಸ್ವಾಮಿಯ ದಯದಿಂದ ಮಹಯೋಗಿ | ಎನಿಸಿ | ಭೂಮಿಯೊಳಗೆ ಬಾಳಿದನು ಚನ್ನಾಗಿ ||8|| ಭಂಗಮಾಡುವಾಗ ದ್ರೌಪದಿ | ಸಿರಿ | ರಂಗ ಯೆನಲಾಗಿ ಕಾಯ್ದ ಶ್ರೀಪತಿ | ಕಂಗಡದಲೆ ಪುರಂದರನ ಅಂತರಂಗ ವಿಜಯವಿಠ್ಠಲ ನಂಬು ||9||

Thoughts & Reflections

0

No reflections shared yet. Be the first to share your thoughts!

Share your thought