Bhasaka
← Back to home

ಗಂಗೆ ಶೋಭನ ತರಂಗೆ

Author: ವಿಜಯದಾಸCategory: ಶ್ರೀಗಂಗೆ
ಗಂಗೆ ಶೋಭನ ತರಂಗೆ ರಂಗನಂಘ್ರಿಯಂಗುಷ್ಠೆ ಸಂಗೆ ಭವಭಂಗೆ ಇಂದ್ರಸೇನನು ಸ್ವರ್ಗವ ಪರಿಹರಿಸಿ ಯಿರಲು ಉಪೇಂದ್ರ ಭಗವಂತ ಪಟುರೂಪ ಧರಿಸಿ ಚಂದ್ರಮಂಡಲ ಮೀರಿ ಬೆಳದಜಾಂಡವನೊಡಿಯೆ ಸಾಂದ್ರಗುಣದಿಂದ ಉದ್ಭವಿಸಿದೆ ಜನನಿ ||1|| ಕಮಲಜನು ಪಾತ್ರಿಯೊಳು ಧರಿಸಿ ಸಿರಿಹರಿಪಾದ ಕಮಲವನು ತೊಳಿಯಲಾವೇಗದಿಂದ ವಿಮಲಗತಿಯಲಿ ಬಂದು ಮಂದಾಕಿನಿ ಎನಿಸಿ ಸುಮನ ಸಾವನಿಯಲ್ಲಿ ಪರಿದೆ ಸ್ವರ್ಣನದಿಯೇ||2|| ಧ್ರುವಲೋಕಕಿಳಿದು ಅಮರಾಲಯವ ಸಾರಿದೆ ರವಿಯಂತೆ ಪೊಳೆವುತ ಅಜನಮಧ್ಯ ತವಕದಿಂದಲಿ ಧುಮುಕಿ ಚತುರಭಾಗವಾದೆ ಭವ ಪರಿಹರಿಸಿ ಭಾಗೀರಥಿ ಎನಿಸಿದೆ ||3|| ಶಿವನ ಮಸ್ತಕದಲ್ಲಿ ಶೋಭಿಸುವ ಮಹಾಮಹಿಮೆ ಭವದೊರೆ ಭಗೀರಥಗೆ ಒಲಿದು ಬರುತ ಕವಿಜನ್ಹು ಮುನಿಯಿಂದ ಪುಟ್ಟಿ ಹಿಮಗಿರಿದಾಟಿ ಜವನ ಮನಿಯ ಕೊಡ ಮಣಿಕರ್ಣಿಕೆ ನೆರದೆ||4|| ಅಳಕನಂದನೆ ನಿನ್ನ ಸ್ಮರಣೆ ಮಾಡಿದ ಜನಕೆ ಕುಲಕೋಟಿ ಉದ್ಧಾರ ನಿಃಸಂದೇಹಾ ಸಲಿಲವನು ಸ್ಪರ್ಶ ಮಜ್ಜನ ಪಾನ ಪಾಡಿದರೆ ಪೊಳೆವ ವೈಕುಂಠಪುರ ಅವನ ಹೃದಯದಲಿ||5|| ಕುಲಪ್ರವಹವಾಗಿದ್ದ ಜೀವರ ಪುಣ್ಯವನು ಹೇಳಿ ಕೇಳುವವನಾರು ಮೂಲೋಕದಿ ಸೀಲಗುಣ ಸಂಪನ್ನೆ ವರುಣನರ್ಧಾಂಗಿನಿ ಕಾಲ ಕಾಲಕೆ ನಿನ್ನ ಧ್ಯಾನದಿಂದಲ್ಲಿರಿಸು ||6|| ದೇಶದೇಶದಲಿಂದ ಬಂದ ಸುಜನರ ಪಾಪ ನಾಶ ಮಾಳ್ಪ ಕಾಮಿತ ಫಲಪ್ರದೆ ಕಾಸಿ ನಿರ್ಮಿತ ಬಿಂದು ಮಾಧವ ಚಲುವ ಶ್ರೀನಿವಾಸ ಯದುಪತಿ ವಿಜಯವಿಠ್ಠಲನ ಸುತೆ ಖ್ಯಾತೇ ||7||

Thoughts & Reflections

0

No reflections shared yet. Be the first to share your thoughts!

Share your thought